ನರೇಗಾ ಹಣ ಬಿಡುಗಡೆ ಬಾಕಿ ಇಲ್ಲ: ಸಚಿವೆ ಹೆಬ್ಬಾಳ್ಕರ್ ಗೆ ಸಂಸದ ಕೋಟ ತಿರುಗೇಟು

ಉಡುಪಿ: ಯುಪಿಎ ಸರಕಾರದ ಅವಧಿಯಲ್ಲಿದ್ದ 33 ಸಾವಿರ ಕೋಟಿ ರೂ. ನರೇಗಾ ಬಜೆಟ್ ಈಗ 86 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಒಂದು ದಿನಕ್ಕೆ 150ರೂ. ಕನಿಷ್ಟ ಕೂಲಿಯನ್ನು 370ರೂ.ಗೆ ಏರಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ನರೇಗಾ ಹಣ ಬಿಡುಗಡೆ ಬಾಕಿ ಇಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕೇಂದ್ರದಿಂದ ನರೇಗಾ ಹಣ ಬಂದಿಲ್ಲ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಪಕ್ಕೆ ಅವರು ಅವರು ಮಾಧ್ಯಮದ ಮೂಲಕ ಉತ್ತರಿಸಿದರು.ಉಡುಪಿಗೆ 7.90 ಸಾವಿರ ಮಾನವ ದಿನಗಳ ಕೂಲಿ ನೀಡಿದೆ ಮತ್ತು 50.51 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದರು.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿ.ಆರ್.ಪಾಟೀಲ್‌ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜೀವ ಗಾಂಧಿ ವಸತಿ ನಿಗಮ ದೊಡ್ಡ ಭ್ರಷ್ಟಾಚಾರದ ಆರೋಪ ಹೊತ್ತಿದೆ. ಉಪ ಮುಖ್ಯಮಂತ್ರಿಗಳು ನಮ್ಮ ಸರಕಾರ ದಲ್ಲಿ ಭ್ರಷ್ಟಾಚಾರ ಆಗಿಲ್ಲ ಎಂದು ಖಂಡಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಕನ್ನಡಿಯಷ್ಟೇ ಸತ್ಯ.ತಕ್ಷಣ ಮುಖ್ಯಮಂತ್ರಿ ವಸತಿ ಮಂತ್ರಿಯ ರಾಜೀನಾಮೆ ಪಡೆಯಬೇಕು ಎಂದು ತಿಳಿಸಿದರು.