ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ

ಬ್ರಹ್ಮಾವರ: ಇಲ್ಲಿನ ರಾ.ಹೆ 66 ರ ಪಕ್ಕದಲ್ಲಿರುವ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸನ್ ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪತ್ರಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮವು ಜ.29 ರಂದು ಬಿ.ಡಿ.ಶೆಟ್ಟಿ ಆಡಿಟೋರಿಯಂ ಹಾಲ್ ನಲ್ಲಿ ಜರುಗಿತು.

 

ಮುಖ್ಯ ಅತಿಥಿಗಳಾಗಿ ಮಲ್ನಾಡ್ ಹೈಟೆಕ್ ಡಯಾಗ್ನಾಸ್ಟಿಕ್ ಸೆಂಟರ್ ಶಿವಮೊಗ್ಗ ಇದರ ವಿಕಿರಣಶಾಸ್ತ್ರ ವಿಭಾಗದ ಸಲಹೆಗಾರ್ತಿ ಡಾ. ಶ್ರದ್ದಾ ಶೆಟ್ಟಿ ಭಾಗವಹಿಸಿದ್ದರು.

ಬಿ.ಡಿ ಶೆಟ್ಟಿ ಬಿಸ್ ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ ಬಾಲಕೃಷ್ಣ ಇವರು ಗೌರವ ಅಥಿತಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾರ್ಚ್ಯೂನ್ ಅಕಾಡೆಮಿಯ ಅಧ್ಯಕ್ಷ ತಾರನಾಥ ಶೆಟ್ಟಿ ವಹಿಸಿದ್ದರು.

ಕೆ.ಎಂಸಿ ಮಂಗಳೂರಿನ ಆರ್ಥೊಪೆಡಿಕ್ ಸರ್ಜನ್  ಡಾ. ದೈವಿಕ್ ಟಿ ಶೆಟ್ಟಿ, ಫಾರ್ಚ್ಯೂನ್ ಕಾಲೇಜ್ ಆಫ್ ನರ್ಸಿಂಗ್ ನ ಪ್ರಾಂಶುಪಾಲೆ ಪ್ರೊ. ಸ್ಮಿತಮೊಲ್ ಇ.ಎಂ, ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.