ಫಸಲ್ ಬಿಮಾ ಯೋಜನೆಯಡಿ ಬೆಳೆ ಸಮೀಕ್ಷೆ: ತಿರಸ್ಕೃತ ಅರ್ಜಿಯ ಆಕ್ಷೇಪಣೆ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2019 ರ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ದತ್ತಾಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿದ ನಂತರ ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಯಾಗದಿರುವುದರಿಂದ ತಿರಸ್ಕರಿಸಿರುತ್ತಾರೆ.

ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಕೋಟ, ಬ್ರಹ್ಮಾವರ ಹಾಗೂ ಕಾಪು ರೈತ ಸಂಪರ್ಕ ಕೇಂದ್ರ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತ್ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ 15 ದಿನಗಳ ಒಳಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಉಡುಪಿ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.