ಕುಂದಾಪುರ (ಆ.24): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ
ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ
ಶುಭ ಹಾರೈಸಿದರು.
ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ
ಕೋವಾಡಿ, ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ
ಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿ
ಶ್ರೀಮತಿ ಸರೋಜ ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ,
ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು
ಸಂಭ್ರಮಿಸಿದರು.















