ಸೆ. 26ಕ್ಕೆ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನಾ ಸಮಾರಂಭ

ಕಟಪಾಡಿ: ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನಾ ಸಮಾರಂಭ ನಾಳೆ (ಸೆ. 26) ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಎಂಸಿಎಫ್ ಮಂಗಳೂರು ಹಾಗೂ ಕರ್ಣಾಟಕ ಬ್ಯಾಂಕ್ ನ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿರುವ ಕಾಂಕ್ರಿಟೀಕರಣದ ಉದ್ಘಾಟನೆಯನ್ನು ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ಗೋಪಾಲಕೃಷ್ಣ ಬಿ. ಸಾಮಗ ಅವರು ನೆರವೇರಿಸುವರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ, ತಾಲ್ಲೂಕು ಪಂಚಾಯತ್ ಸದಸ್ಯ ರಾಜೇಶ್ ಕುಮಾರ್, ನೀಲಾವರ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ವಕೀಲ ಗಣೇಶ್ ಕುಮಾರ್ ಮಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಅಂದು ಬೆಳಿಗ್ಗೆ 6.45ಕ್ಕೆ ದೇಗುಲದಲ್ಲಿ ವಿಶ್ವ ಕಲ್ಯಾಣಕ್ಕಾಗಿ ವಿದ್ವಾನ್ ಪ್ರವೀಣ ತಂತ್ರಿಯವರ ನೇತೃತ್ವದಲ್ಲಿ ಲಕ್ಷತುಳಸಿ ಅರ್ಚನೆ ನೆರವೇರಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ಲಕ್ಷ್ಮೀನಾರಾಯಣ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.