ಮಂಗಳೂರು: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಪರಿವಾರದಿಂದ ಅಂಗಾಂಗ ದಾನ

ಮಂಗಳೂರು: ಅಪಘಾತದ ನಂತರ ಮೆದುಳು ನಿಷ್ಕ್ರಿಯಗೊಂಡ 37 ವರ್ಷದ ಅಪಘಾತ ಸಂತ್ರಸ್ತರ ಅಂಗಾಂಗಗಳನ್ನು ಆತನ ಪರಿವಾರದವರ ಸಮ್ಮತಿಯ ಮೇರೆಗೆ ಅವಶ್ಯವಿದ್ದವರಿಗೆ ದಾನ ಮಾಡಲಾಗಿದೆ. ಮಂಗಳೂರಿನ ಫಾ. ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರದಂದು ಶಸ್ತ್ರಚಿಕಿತ್ಸೆ ನಡೆಸಿ, ಅಂಗಾಗಗಳನ್ನು ಇತರ ಆಸ್ಪತ್ರೆಗಳಿಗೆ ಸಾಗಿಸಲಾಯಿತು.

ಮೂಡಿಗೆರೆಯ ಹೊರಟ್ಟಿ ಗ್ರಾಮದ ಧನ್ಯಕುಮಾರ್ ಹೆಚ್ ಎಂ ಎಂಬವರು ಡಿ.8ರಂದು ಸಬ್ಬೇನಹಳ್ಳಿಯಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು, ಡಿ.9ರಂದು ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆತನ ತಲೆಗೆ ತೀವ್ರ ಗಾಯವಾಗಿತ್ತು. ಧನ್ಯಕುಮಾರ್ ಚಿಕಿತ್ಸೆಗೆ ಸ್ಪಂದಿಸದಿದ್ದಾಗ ವೈದ್ಯರು ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು. ಆಗ ಕುಟುಂಬ ಸದಸ್ಯರು ಅಂಗಾಂಗಗಳನ್ನು ದಾನ ಮಾಡಿ ಇತರ ರೋಗಿಗಳ ಜೀವ ಉಳಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ.

ಮಾನವ ಅಂಗಾಂಗಗಳ ಕಸಿ ಕಾಯಿದೆ 1994 ರ ಅಡಿಯಲ್ಲಿ ಪರಿಣಿತ ವೈದ್ಯರ ಸಮಿತಿಯು ಅವರನ್ನು ಮೆದುಳು ನಿಷ್ಕ್ರಿಯ ವ್ಯಕ್ತಿ ಎಂದು ಘೋಷಿಸಿತು. ಜೀವಸಾರ್ಥಕಥೆಯ ಪ್ರಕಾರ, ಹೃದಯ ಮತ್ತು ಶ್ವಾಸಕೋಶವನ್ನು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ, ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಯನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ, ಒಂದು ಮೂತ್ರಪಿಂಡವನ್ನು ಮಣಿಪಾಲದ ಕೆಎಂಸಿಗೆ ಮತ್ತು ಇನ್ನೊಂದು ಮೂತ್ರಪಿಂಡವನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.