ರೈತರಿಗಾಗಿ ಸಾವಯವ ಕೃಷಿ ಉಚಿತ ತರಬೇತಿ ಕಾರ್ಯಕ್ರಮ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸಹಯೋಗದಲ್ಲಿ ಸಾವಯವ ಸಿರಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಸಾವಯವ ಕೃಷಿ ವಿಷಯಕ್ಕೆ ಸಂಬಂಧಿಸಿದ 2 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಹೊಸದಾಗಿ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ತೊಡಗಿಕೊಂಡಿರುವ ಯುವಕ ರೈತರು, ಮಹಿಳೆಯರು ಹಾಗೂ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ಈ ಹಿಂದೆ ತರಬೇತಿ ಪಡೆಯದೇ ಇರುವ ರೈತರೂ ಸಹ ಪಾಲ್ಗೊಳ್ಳಬಹುದಾಗಿದೆ.

ಆಸಕ್ತರು ರೈತ ಸಂಪರ್ಕ ಕೇಂದ್ರದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 17 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.