ಕರಂಬಳ್ಳಿ ದೇಗುಲದ ತಂತ್ರಿ ಪಾಡಿಗಾರು ವಾಸುದೇವ ತಂತ್ರಿ ಮತ್ತು ಪಾಕತಜ್ಞ ಗುರುರಾಜ ಭಟ್ಟರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ

ಉಡುಪಿ: ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮಸಭೆಯಲ್ಲಿ ದೇವಳದ ತಂತ್ರಿಗಳಾದ ಪಾಡಿಗಾರು ವಾಸುದೇವ ತಂತ್ರಿ ಮತ್ತು ಪಾಕತಜ್ಞ ಗುರುರಾಜ ಭಟ್ಟರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸನ್ಮಾನಿಸಿದರು.

ಪಲಿಮಾರು ಶ್ರೀ ವಿದ್ಯಾಧೀಶತೀರ್ಥರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು, ಸ್ಪೀಕರ್ ವಿಶ್ವೇಶ್ವರ ಹೆಗೆಡೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ ರಘುಪತಿ ಭಟ್, ಮಾಜಿ ಶಾಸಕ ಎಚ್.ಎನ್ ಜೀವರಾಜ್ ಉಪಸ್ಥಿತರಿದ್ದರು.