ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ವಿತರಣೆ: ಜಿಲ್ಲಾಧಿಕಾರಿ

ಉಡುಪಿ 18: ಜಿಲ್ಲೆಯಲ್ಲಿ ಈಗಾಗಲೇ ಹೊಸ ಆದ್ಯತಾ(ಬಿಪಿಎಲ್) ಮತ್ತು ಆದ್ಯತೇತರ(ಎಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ವಿಲೇವಾರಿಗೆ ಬಾಕಿ ಇರುವ ಅರ್ಜಿದಾರರ ಗಮನಕ್ಕೆ ತರುವುದೇನೆಂದರೆ, ಈ ಅರ್ಜಿಗಳಿಗೆ ಪಡಿತರ ಹಂಚಿಕೆಯಾಗಿದ್ದು ಅಂತಹ ಅರ್ಜಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ.

ಬಿಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 10 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ಮತ್ತು ಎಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 15-/- ರೂ ದರದಲ್ಲಿ 10 ಕೆಜಿ ಅಕ್ಕಿಯನ್ನು ಪಡೆಯಬಹುದಾಗಿದೆ . ಅರ್ಜಿದಾರರು ಅರ್ಜಿ ಸಲ್ಲಿಸಿದ ಬಗ್ಗೆ ತಮ್ಮಲ್ಲಿ ಇರುವ ಅರ್ಜಿಯ ಪ್ರತಿಯನ್ನು ಹಾಗೂ ಆಧಾರ್ ಕಾರ್ಡನ್ನ ನ್ಯಾಯಬೆಲೆ ಅಂಗಡಿಗೆ ಹಾಜರುಪಡಿಸಿ ಅಕ್ಕಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.