ಸ್ಪರ್ಧೆಯಲ್ಲಿ ಬಹುಮಾನಕ್ಕಿಂತಲೂ ಭಾಗವಹಿಸುವಿಕೆಯೆ ಮುಖ್ಯ: ವಿಜಯ್ ಬಲ್ಲಾಳ್

ಉಡುಪಿ: ವೇದಿಕೆಯನ್ನುವುದು ಮುಂದಿನ ಜೀವನದ ಭವಿಷ್ಯಕ್ಕೆ ಮುನ್ನುಡಿಗೆ ಸಹಕಾರಿಯಾಗುತ್ತದೆ. ಸ್ಪರ್ಧೆಯಲ್ಲಿ ಬಹುಮಾನ ಮುಖ್ಯವಲ್ಲ, ಆದರೆ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಅಂಬಲಪಾಡಿ ದೇವಸ್ಥಾನದ ಆಡಳಿತ ಮಂಡಳಿಯ ಧರ್ಮದರ್ಶಿಗಳಾದ ನಿ.ಬಿ ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು.

ಮಂಗಳವಾರದಂದು ಮಲ್ಪೆಯ ಸರಕಾರಿ ಫ್ರೌಢಶಾಲಾ ಸಭಾಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸುಮನಸ ಕೊಡವೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲಾದೇವಿಯಾದ ಶಾರದೆಯನ್ನು ಆರಾಧಿಸಿದಲ್ಲಿ ನಮ್ಮ ಜೀವನ ಮತ್ತು ಕಲೆಯು ಸುರಕ್ಷಿತವಾಗಿರುತ್ತದೆ. ಎಲ್ಲರಲ್ಲಿಯೂ ಯಾವುದಾದರೂ ಒಂದು ರೀತಿಯ ಕಲೆ ಇರುತ್ತದೆ. ಅವಕಾಶ ಸಿಕ್ಕಿದಾಗಲೆಲ್ಲಾ ಅದನ್ನು ಸಮಾಜಕ್ಕೆ ತೋರ್ಪಡಿಸಬೇಕು. ಕಲಾ ಶಾರದೆಯ ಆರಾಧನೆಯನ್ನು ಬಿಡಬಾರದು ಎಂದು ಅವರು ಹೇಳಿದರು.

ಬಳಿಕ ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಆಡಳಿತ ಉಪನಿರ್ದೇಶಕ ಶಿವರಾಜ್ ಮಾತನಾಡಿ, ಬದುಕೇ ಒಂದು ನಾಟಕ. ವಿವಿಧ ರಂಗ ವೇದಿಕೆಯಲ್ಲಿ ನಾವು ಅನೇಕ ಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ. ನಾಟಕದಲ್ಲಿ ನಮ್ಮ ಮನಸ್ಸಿನ ದೈಹಿಕ ಮಾನಸಿಕ ಆಧ್ಯಾತ್ಮಿಕ ಪರಿಪೂರ್ಣತೆಯ ವ್ಯಕ್ತಿತ್ವವನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೇಖರ್ ಜಿ ಕೋಟ್ಯಾನ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ತೀರ್ಪುಗಾರರಾದ ಪೂರ್ಣಿಮಾ ಸುರೇಶ್ ಎಮ್ ಎಸ್ ಭಟ್, ಲಕ್ಷ್ಮೀನಾರಾಯಣ ಭಟ್, ಆರ್ಮುಗಂ, ಮಲ್ಪೆ ಉದ್ಯಮಿ ಅನ್ವರ್, ನಾಟಕ ಅಕಾಡೆಮಿಯ ಸದಸ್ಯ ಪ್ರದೀಪ್ ಚಂದ್ರ ಕುತ್ಪಾಡಿ ಮಲ್ಪೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ, ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು ಉಪಸ್ಥಿತರಿದ್ದರು

ಪ್ರಕಾಶ್ ಜಿ ಕೊಡವೂರು ಸ್ವಾಗತಿಸಿದರು. ಸುಮನಸಾ ಕೊಡವೂರು ನಾಟಕ ತಂಡದ ಕಾರ್ಯದರ್ಶಿ ವಂದಿಸಿದರು. ಯೋಗಿಶ್ ಕೊಳಲಗಿರಿ ನಿರೂಪಿಸಿದರು.