ಫಾಸಿಲ್ ಹಂತಕರು ಪೊಲೀಸ್ ಬಲೆಗೆ- ಆರು ಆರೋಪಿಗಳು ಅರೆಸ್ಟ್

ಮಂಗಳೂರು ಫಾಸಿಲ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಘಟನೆಗೆ ಸಂಬಂಧಸಿದಂತೆ ಆರು ಜನರನ್ನು ಬಂಧಿಸಲಾಗಿದೆ.

ಸುಹಾಸ್ ಶೆಟ್ಟಿ, ಮೋಹನ್ ಅಲಿಯಾಸ್ ನೇಪಾಳಿ ಮೋಹನ್, ಶ್ರೀನಿವಾಸ್, ಗಿರಿಧರ್ ಡ್ರೈವರ್, ಅಭಿಷೇಕ್, ದೀಕ್ಷಿತ್ ಬಂಧನಕ್ಕೆ ಒಳಗಾದವರು.

ಉದ್ಯಾವರದಲ್ಲಿ ಇವರನ್ನು ಬಂಧಿಸಲಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ವಿಚಾರಣೆ ನಡೆಸಲಿದ್ದೇವೆ ಎಂದು ಮಂಗಳೂರು ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.