ಪೇಜಾವರ ಶ್ರೀಗಳ ಆರೋಗ್ಯ ಹಿನ್ನೆಲೆ; ಮುಖ್ಯಮಂತ್ರಿ ಯಡಿಯೂರಪ್ಪ ಇಂದು-ನಾಳೆ ಉಡುಪಿಯಲ್ಲೇ

ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ (ನಾಳೆ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಡುಪಿಯಲ್ಲೇ ಉಳಿಯಲಿದ್ದಾರೆ.
ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದ  ಅವರು, ಆಸ್ಪತ್ರೆ ವೈದ್ಯರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ಚರ್ಚಿಸಿದ್ದಾರೆ.
ಅನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿಲ್ಲ. ಅವರ ಆರೋಗ್ಯ ಸ್ಥಿತಿ ಕ್ಷೀಣವಾಗುತ್ತಿದೆ. ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ಪ್ರಯತ್ನ ಮುಂದುವರೆದಿದೆ. ಇವತ್ತು, ನಾಳೆ ಉಡುಪಿಯಲ್ಲೇ ಇರಲಿದ್ದೇನೆ ಎಂದು ತಿಳಿಸಿದ್ದಾರೆ‌.