ಮಾ. 9-10 : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್, ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ

ಉಡುಪಿ:ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ದಕ್ಷಿಣ ಕನ್ನಡ –ಉಡುಪಿ ಇದರ ವತಿಯಿಂದ ವೃತ್ತಿಪರ ಛಾಯಾಗ್ರಾಹಕರ ಕುಟುಂಬಕ್ಕೆ ಭದ್ರತೆ ನೀಡುವ ದೃಷ್ಟಿಯಿಂದ ನಿಧಿ ಸಂಗ್ರಹಕ್ಕಾಗಿ ಛಾಯಾಗ್ರಾಹಕರಿಗಾಗಿ ರಾಜ್ಯ ಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಮಾ. 9-10 ರಂದು  ಉಡುಪಿ ಬೀಡಿನ ಗುಡ್ಡೆ  ಮಹಾತ್ಮ ಗಾಂಧಿ  ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದೆ.

 ಈ ಪಂದ್ಯಾಟದಲ್ಲಿ ಪ್ರಥಮ ಬಹುಮಾನ ರೂ 1,11,111 ಹಾಗು ದ್ವಿತೀಯ ಬಹುಮಾನ ರೂ: 55,555  ಹಾಗು ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು ಮಾರ್ಚ್ 9ರಂದು ಬೆಳಿಗ್ಗೆ ಗಂಟೆ 8.45ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಾರ್ಚ್ 10ರಂದು ಸಂಜೆ ಗಂಟೆ 4.೦೦ ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಎಸ್.ಕೆ.ಪಿ.ಎ ದಕ್ಷಿಣ ಕನ್ನಡ-ಉಡುಪಿ  ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲಿಸ್ ತಿಳಿಸಿದ್ದಾರೆ.