ಇತಿಹಾಸದಲ್ಲಿ ಮೊದಲ ಬಾರಿ ಇಸ್ರೇಲಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ: ಎಸ್ ಜೈಶಂಕರ್

ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷವು ಯುಗಗಳಿಂದಲೂ ನಡೆಯುತ್ತಿದೆ. ನಮಗೆ ಕೆಲವು ರಾಜಕೀಯ ಕಾರಣಗಳಿವೆ, ಇದರಿಂದಾಗಿ ನಾವು ಇಸ್ರೇಲ್ ಜೊತೆಗಿನ ನಮ್ಮ ಸಂಬಂಧವನ್ನು ಮುಂದುವರಿಸಲಿಲ್ಲ. ನಾವು ನಮ್ಮನ್ನು ನಿರ್ಬಂಧಿಸಿದ್ದೇವೆ. ಭಾರತದ ಇತಿಹಾಸದಲ್ಲಿ ಇಸ್ರೇಲ್‌ಗೆ ಭೇಟಿ ನೀಡಿದ ಮೊದಲ ಪ್ರಧಾನಿ ಮೋದಿ. ನಾವು ಬಾಂಧವ್ಯದಿಂದ ಪ್ರಯೋಜನ ಪಡೆಯಬಹುದೆಂದು ಇಡೀ ದೇಶಕ್ಕೆ ತಿಳಿದಿದೆ. ಒಮ್ಮೆ ನೀವು ವೋಟ್ ಬ್ಯಾಂಕ್ ರಾಜಕೀಯದಿಂದ ಹೊರಬಂದರೆ, ಅದು ನಿಮ್ಮ ವಿದೇಶಾಂಗ ನೀತಿಗಳ ಮೇಲೆ ಸಹ ಪರಿಣಾಮ ಬೀರುತ್ತದೆ. ವೋಟ್ ಬ್ಯಾಂಕ್ ರಾಜಕೀಯವು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಪ್ರಾಬಲ್ಯ ಸಾಧಿಸಿದ ದಿನಗಳು ಕಳೆದುಹೋಗಿವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ಭಾನುವಾರ ಜೈಶಂಕರ್ ಅವರು ತಮ್ಮ ಪುಸ್ತಕ ‘ದಿ ಇಂಡಿಯಾ ವೇ: ಸ್ಟ್ರಾಟಜೀಸ್ ಫಾರ್ ಎನ್ ಅನ್ ಸರ್ಟೆನ್ ವರ್ಲ್ಡ್’ ನ ಗುಜರಾತಿ ಅನುವಾದದ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಕೆಲವು ರಾಜಕೀಯ ಕಾರಣಗಳಿಂದಾಗಿ ಇಸ್ರೇಲ್ ಭಾರತ ಸಂಬಂಧವನ್ನು ಮುಂದುವರಿಸಿಕೊಂಡು ಹೋಗುವುದು ಭಾರತಕ್ಕೆ ಸಾಧ್ಯವಾಗಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರದ ಹಿತಾಸಕ್ತಿಯನ್ನು ಬಲಿ ಕೊಡುವ ಸಮಯ ಈಗಿಲ್ಲ. ಇಸ್ರೇಲಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಮೋದಿ. ಇಸ್ರೇಲ್-ಭಾರತ ಸಂಬಂಧದಿಂದ ದೇಶಕ್ಕೆ ಪ್ರಯೋಜನವಿರುವುದು ದೇಶಕ್ಕೆ ತಿಳಿದಿದೆ ಎಂದರು.

ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸುವ ಭಾರತದ ನಿರ್ಧಾರದ ಬಗ್ಗೆ ಮಾತನಾಡಿದ ಜೈಶಂಕರ್, ಜನರಿಗೆ ಭಾರತದ ಪರಿಸ್ಥಿತಿ ಮತ್ತು ಇಲ್ಲಿನ ಆದಾಯದ ಸ್ಥಿತಿ ಬಗ್ಗೆ ಅರ್ಥವಾಗುತ್ತಿಲ್ಲ. ತೈಲ ಆಮದು ವಿಷಯವು ವಿದೇಶಾಂಗ ನೀತಿಗಿಂತಲೂ ಹೆಚ್ಚಾಗಿ ಜನರ ಹಿತಾಸಕ್ತಿಯ ವಿಷಯವಾಗಿತ್ತು. ನಾವು ಮೊದಲು ನಮ್ಮ ಜನರ ಬಗ್ಗೆ ಯೋಚಿಸಬೇಕು ಎಂಬುದು ಪ್ರಧಾನಿ ಮೋದಿಯವರ ಸೂಚನೆ ಎಂದು ರಷ್ಯಾ ತೈಲ ನೀತಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.