ತೆಲುಗಿನ ಜನಪ್ರಿಯ ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ: ಸ್ನೇಹಿತನಿಂದ ಕಿರುಕುಳ ಆರೋಪ

ಹೈದರಬಾದ್: ತೆಲುಗಿನ ಜನಪ್ರಿಯ ಕಿರುತೆರೆ ನಟಿ ಶ್ರಾವಣಿ ಅವರು ಮಧುರಾ ನಗರದಲ್ಲಿ ಇರುವ ತಮ್ಮ ನಿವಾಸದಲ್ಲಿ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರಾವಣಿ ಅವರು ‘ಮನಸು ಮಮತ’, ‘ಮೌನರಾಗಂ’ ಮೊದಲಾದ ತೆಲುಗಿನ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದರು.

ಕೆಲದಿನಗಳ ಹಿಂದೆ ಟಿಕ್‌ಟಾಕ್ ಮೂಲಕ ಪರಿಚಯವಾದ ದೇವರಾಜ್ ರೆಡ್ಡಿ ಎನ್ನುವ ವ್ಯಕ್ತಿ ಈಕೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪ್ರೀತಿ ನಾಟಕವಾಡಿ ಕೆಲ ಫೋಟೊ, ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ದುಡ್ಡು ಪೀಕಿದ್ದ ಎಂದು ತಿಳಿದುಬಂದಿದೆ.

ಈ ಬಗ್ಗೆ ಶ್ರಾವಣಿ ಪೊಲೀಸರಿಗೆ ದೂರು ನೀಡಿದ್ದಳು ಎಂದು ಕುಟುಂಬಸ್ಥರು ಹೇಳಿದ್ದಾರೆ. ದೇವರಾಜ್ ರೆಡ್ಡಿ ಕಿರುಕುಳದಿಂದಲೇ ಮನನೊಂದು ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ.