ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪೋಸ್ಟ್ ಕಾರ್ಡ್ ಚಳುವಳಿ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಕು. ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು, ತನ್ಮೂಲಕ ನೈಜ ಅಪರಾಧಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ನಗರದ ವಿವಿಧ ಕಾಲೇಜು ಮತ್ತು ಹಾಸ್ಟೆಲ್ ಗಳಲ್ಲಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ಆರಂಭಿಸಲಾಯಿತು.

ಪೋಸ್ಟ್ ಕಾರ್ಡ್ ನ ಮೂಲಕ ರಾಜ್ಯದ ಮುಖ್ಯಸ್ಥರಾದ ರಾಜ್ಯಪಾಲರಿಗೆ, ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳ ಮೂಲಕ ಮನವಿಯನ್ನು ಮಾಡಲಾಯಿತು.

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಮುಖ ಭಟ್, ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ, ನಗರ ಕಾರ್ಯದರ್ಶಿ ಶ್ರೀವತ್ಸ, ಸಹ-ಕಾರ್ಯದರ್ಶಿ ಕಾರ್ತಿಕ್ ಮತ್ತು ಭಾವನ, ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಶಾಸ್ತ್ರಿ, ಹಾಗೂ ಕಾರ್ಯಕರ್ತರಾದ ರವಿಚಂದ್ರ, ಪ್ರಸನ್ನ, ಪ್ರದೀಪ್, ರಕ್ಷಿತ್, ಪ್ರಶ್ಮಾ , ಮನು ಶೆಟ್ಟಿ ಭಾಗವಹಿಸಿದರು.