ಪರಶುರಾಮ ಥೀಮ್ ಪಾರ್ಕ್: ವಿದ್ಯುತ್ ದೀಪಾಲಂಕಾರ ಉದ್ಘಾಟನೆ

ಕಾರ್ಕಳ: ಇಲ್ಲಿನ ಬೈಲೂರಿನಲ್ಲಿ ಜ.27 ರಿಂದ 29 ರವರೆಗೆ ನಡೆಯಲಿರುವ ಪರಶುರಾಮ ಥೀಮ್ ಪಾರ್ಕ್ ನ ಉದ್ಘಾಟನೆಗೂ ಮುನ್ನ ವಿದ್ಯುತ್ ದೀಪಾಲಂಕಾರ ಉದ್ಘಾಟನೆಯನ್ನು ಇಂಧನ ಸಚಿವ ಸುನಿಲ್ ಕುಮಾರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿ.ಪಂ.ಸಿಇಒ ಪ್ರಸನ್ನ ಎಚ್, ಗೇರು ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾ ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಮೆಸ್ಕಾಂ ಎಂ.ಡಿ ಮಂಜಪ್ಪ, ಬೋಳ ಪ್ರಭಾಕರ್ ಕಾಮತ್ ಮತ್ತು ರಮೇಶ್ ಕಲ್ಲೊಟ್ಟೆ ಉಪಸ್ಥಿತರಿದ್ದರು.