ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯನ ಪರೀಕ್ಷೆ: ಪ್ರದೀಪ್ ಕುಕ್ಕುಡೆ ಉತ್ತೀರ್ಣ

ಉಡುಪಿ: ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯನ ಪರೀಕ್ಷೆಯಲ್ಲಿ ಪ್ರದೀಪ್ ಕುಕ್ಕುಡೆ ಅವರು ಶೇಕಡಾ 90% ಅಂಕ ಗಳಿಸಿ ಜಿಲ್ಲೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ವಿದ್ವಾನ್ ಮಹಾಬಲೇಶ್ವರ ಭಾಗವತ್ ಅವರ ಶಿಷ್ಯ ಹಾಗೂ ಉಡುಪಿ ಮುಕುಂದ ಕೃಪಾ ಸಂಗೀತ ಶಾಲೆಯ ವಿದ್ಯಾರ್ಥಿ.