ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಅಧಿಕೃತ ಘೋಷಣೆ

ಶ್ರೀರಾಮ ಸೇನೆ ಸಂಘಟನೆಯ ಮುಖಂಡ, ಪ್ರಖರ ಹಿಂದುತ್ವವಾದಿ ಪ್ರಮೋದ್ ಮುತಾಲಿಕ್ ಕಾರ್ಕಳ ಕ್ಷೇತ್ರದಿಂದ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದ್ದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾವು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ, ಯರು ಏನೇ ಒತ್ತಡ ಹಾಕಿದರೂ ಕಾರ್ಕಳದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೀವಿನ ಧ್ವನಿಯಾಗಿ, ಅವರೆಲ್ಲರ ಒತ್ತಡದಿಂದ ತಾವು ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ತಾನು ಬಿಜೆಪಿ ಹಾಗೂ ಮೋದಿ ವಿರೋಧಿಯಲ್ಲ. ತಾನು ಕೆಲವು ವ್ಯಕ್ತಿಗಳ ವಿರುದ್ದ, ಭ್ರಷ್ಟ ಮತ್ತು ಹಿಂದೂ ವಿರೋಧಿಗಳ ವಿರುದ್ದ ಹೋರಾಟ ಮಾಡುತ್ತಿದ್ದು, ಗೆದ್ದರೂ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದರು.