ಕಾರಿನಲ್ಲಿ ಆಕಸ್ಮಿಕ ಬೆಂಕಿ: ಗರ್ಭಿಣಿ ಮಹಿಳೆ ಮತ್ತು ಪತಿ ಸಜೀವ ದಹನ

ಕುಟ್ಟಿಯತ್ತೂರು: ಕೇರಳದ ಕುಟ್ಟಿಯತ್ತೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗುರುವಾರ ಸಂಭವಿಸಿದ ಭೀಕರ ದುರ್ಘಟನೆಯೊಂದರಲ್ಲಿ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನರಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಷಾ (26) ಎಂದು ಗುರುತಿಸಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳು ಇನ್ನಿತರರೊಂದಿಗೆ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Image

ತಕ್ಷಣ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಪ್ರಿಜಿತ್ ಮತ್ತು ರೀಷಾ ಅವರನ್ನು ಹೊರತೆಗೆದರು, ಆದರೆ ಅವರು ಅದಾಗಲೇ ಮೃತಪಟ್ಟಿದ್ದರು. ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದು, ವಾಹನಕ್ಕೆ ಬೆಂಕಿ ತಗಲಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದಾರೆ. ಸಂತ್ರಸ್ತ ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

2020 ರ ಮಾಡೆಲ್ ಮಾರುತಿ ಎಸ್-ಪ್ರೆಸ್ಸೊದ ಮುಂಭಾಗದ ಬಾಗಿಲನ್ನು ತೆರೆಯಲು ಸಾಧ್ಯವಾಗದ ಕಾರಣ ದಂಪತಿ ಸುಡುವ ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರ ಪ್ರಕಾರ, ಮೃತಪಟ್ಟ ಮಹಿಳೆ ಗರ್ಭಿಣಿಯಾಗಿದ್ದು, ಕಾರಿನ ಮುಂಭಾಗದ ಬಾಗಿಲು ತೆರೆದು ದಂಪತಿಯನ್ನು ರಕ್ಷಿಸಲು ಪ್ರಯತ್ನಿಸಿದ್ದರೂ ವಿಫಲರಾಗಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಕಾರಿನೊಳಗೆ ಸಿಲುಕಿಕೊಂಡಿದ್ದ ದಂಪತಿಯನ್ನು ರಕ್ಷಿಸಲು ಸುಟ್ಟ ಕಾರಿನ ಕಡೆಗೆ ಓಡುತ್ತಿರುವುದನ್ನು ಟಿವಿ ದೃಶ್ಯಾವಳಿಗಳು ತೋರಿಸಿವೆ.

ತಜ್ಞರ ಸಹಾಯದಿಂದ ಕಾರನ್ನು ಸರಿಯಾಗಿ ಪರೀಕ್ಷಿಸಲಾಗುವುದು. ಇನ್ನೂ ಸ್ವಲ್ಪ ತನಿಖೆ ನಡೆಸಿ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮ ವರದಿಯಾಗಿದೆ.