ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರಯಾಗದ ಪೂರ್ವ ತಯಾರಿ ಪ್ರಾರಂಭ 

ಉಡುಪಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22 ರಿಂದ ಪ್ರಾರಂಭ ಗೊಳ್ಳಲಿರುವ ಅತಿರುದ್ರ ಮಹಾಯಾಗದ ಹೋಮ ಕುಂಡಗಳು, ಸಭಾಂಗಣ, ಭೋಜನ ಶಾಲೆ, ಉಗ್ರಾಣ, ಪಾಕಶಾಲೆ ಇತ್ಯಾದಿ ವ್ಯವಸ್ತೆ ಗಳಿಗೋಸ್ಕರ ಜಾಗ ಸಮತಟ್ಟುಗೊಳಿಸುವ ಕಾರ್ಯವು ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಇಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸುಭಾಕರ ಸಾಮಂತ್ ಮತ್ತು ದಿನೇಶ್ ಪ್ರಭು, ಶಾಶ್ವತ ಟ್ರಸ್ಟಿ ದಿನೇಶ್ ಸಾಮಂತ್, ಇತರ ಟ್ರಸ್ಟಿ ಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.