ಮಲ್ಪೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಪೂರ್ವ ತಯಾರಿ ಸಭೆ

ಮಾರ್ಚ್ 14 ರಂದು ಉಡುಪಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು, ಇದರ ಪೂರ್ವ ತಯಾರಿ ಸಭೆ ಮಲ್ಪೆಯಲ್ಲಿ ಇಂದು ನಡೆಯಿತು.

ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಮಲ್ಪೆ ವ್ಯಾಪ್ತಿಯ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಮಾ.14ರಂದು ಉಡುಪಿಯ ಪರ್ಕಳದಿಂದ ಬ್ರಹ್ಮಾವರದ ವರೆಗೆ ನಡೆಯರುವ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಬೃಹತ್ ವಾಹನ ರ‍್ಯಾಲಿ ನಡೆಯಲಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಭಜನಾ ಮಂದಿರದ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.