ಸ್ಕೂಟಿಗೆ ಖಾಸಗಿ‌ ಬಸ್ ಡಿಕ್ಕಿ: ಸ್ಕೂಟಿ ಸವಾರೆ ಗರ್ಭಿಣಿ ಸ್ಥಳದಲ್ಲೇ ಸಾವು

ಉಡುಪಿ: ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರೆ ಗರ್ಭಿಣಿ  ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಿನ್ನಿಮೂಲ್ಕಿ ಬಳಿ ಗುರುವಾರ ರಾತ್ರಿ ನಡೆದಿದೆ.
ಮೃತ ಸ್ಕೂಟಿ ಸವಾರೆಯನ್ನು
ಅಲೆವೂರು ಗ್ರಾಮ ಪಂಚಾಯಿತಿ ಸದಸ್ಯ ನಂದಗೋಕುಲ ಸುಧಾಕರ ಪೂಜಾರಿ ಪತ್ನಿ ಕೆಮ್ತೂರು ನಿವಾಸಿ ಮಮತ ಪೂಜಾರಿ (35) ಎಂದು ಗುರುತಿಸಲಾಗಿದೆ. ಇಂದು ರಾತ್ರಿ 9 ಗಂಟೆ ಸುಮಾರಿಗೆ ಮಮತಾ ಅವರು ತನ್ನ ಸ್ಕೂಟಿಗೆ ಕಿನ್ನಿಮೂಲ್ಕಿ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು  ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ  ಎಕೆಎಮ್‌ಎಸ್ ಬಸ್ ಹೊಡೆದ ರಭಸಕ್ಕೆ ಮಮತಾ ಅವರು ಸ್ಥಳದಲ್ಲೇ ಕೊನೆಯುಸಿರುಳೆದಿದ್ದಾರೆ.
ಅಪಘಾತ ಬಳಿಕ ಬಸ್ ಚಾಲಕ, ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.  ಬಸ್ ಚಾಲಕ ಮೊಬೈಲ್ ನಲ್ಲಿ ಮಾತನಾಡಿಕೊಂಡು ಚಾಲನೆ ಮಾಡುತ್ತಿದ್ದು, ಅವನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದೃಶ್ಯಿಗಳು ದೂರಿದ್ದಾರೆ.