ಮಂಗಳೂರು: ವಾಮಂಜೂರಿನಲ್ಲಿ ಅಣಬೆ ಕಾರ್ಖಾನೆ ವಿರುದ್ದ ಸಾರ್ವಜನಿಕರಿಂದ ಧರಣಿ

ಮಂಗಳೂರು: ನಗರದ ಹೊರವಲಯದಲ್ಲಿರುವ ವಾಮಂಜೂರು ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಣಬೆ ಕಾರ್ಖಾನೆಯಿಂದ ಆರೋಗ್ಯ ಹಾನಿಯಾಗುತ್ತಿರುವ ವಿರುದ್ದ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಗುರುವಾರದಂದು ಇಲ್ಲಿನ ವ್ಯಾಪಾರಿಗಳು ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಿ, ಪ್ರತಿಭಟನೆ ನಡೆಸುತ್ತಿರುವ ನಿವಾಸಿಗಳಿಗೆ ಬೆಂಬಲ ಸೂಚಿಸಿದ್ದಾರೆ.

ಅಣಬೆ ಕಾರ್ಖಾನೆಯನ್ನು ಮುಚ್ಚುವಂತೆ ಒತ್ತಾಯಿಸಿ ನಿವಾಸಿಗಳು ಸ್ಥಳೀಯ ಗ್ರಾಮಸ್ಥ ರಿಯಾಜ್ ಅಹಮದ್ ಅವರೊಂದಿಗೆ ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದು, ಸುಮಾರು 190 ಮನೆಗಳಿರುವ ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಖಾನೆಯೊಳಗೆ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದ್ದು, ಅಣಬೆ ಕಟಾವು ಮತ್ತು ಸಂಸ್ಕರಣೆ ವೇಳೆ ದುರ್ವಾಸನೆ ಬೀರುತ್ತಿರುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿ ಮತ್ತು ಕಂಪನಿ ಅಧಿಕಾರಿಗಳು ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡುವವರೆಗೂ ಪ್ರತಿಭಟನೆ ನಡೆಸಲಾಗುವುದು ಮತ್ತು ಅಲ್ಲಿಯವರೆಗೆ ಕಾರ್ಖಾನೆಯನ್ನು ಮುಚ್ಚಲಾಗುವುದು ಎಂದು ಅಹ್ಮದ್ ತಿಳಿಸಿದ್ದಾರೆ ಎಂದು ಟಿಒಐ ವರದಿ ಹೇಳಿದೆ.