ನಮ್ಮಿಂದ ತಪ್ಪುಗಳಾಗಿದ್ದರೆ ಸಾಬೀತುಪಡಿಸಿ, ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ; ವಿಪಕ್ಷ ನಾಯಕರಿಗೆ ಸವಾಲೆಸೆದ ಸಿಎಂ

ಬೆಂಗಳೂರು: ನಮ್ಮಿಂದ ತಪ್ಪುಗಳಾಗಿದ್ದರೆ ಸಾಬೀತುಪಡಿಸಿ. ನಮ್ಮ ತಪ್ಪು ಸಾಬೀತಾದ್ರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ಸಾವಲೆಸೆದರು.

ವಿಜಯೇಂದ್ರ (ಯಡಿಯೂರಪ್ಪ ಪುತ್ರ) ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಇಂದು ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆ ಸಂದರ್ಭದಲ್ಲಿ ಅವರು ಖಡಕ್ ಆಗಿ ಉತ್ತರಿಸಿದರು.

ವಿಪಕ್ಷ ನಾಯಕರ ಟೀಕೆಗಳಿಗೆ ಸ್ವಲ್ಪ ಖಾರವಾಗಿಯೇ ಉತ್ತರಿಸಿದ ಸಿಎಂ, ಮುಂದಿನ ಚುನಾವಣೆಯಲ್ಲಿ ನಾವು 135 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ. ಮುಂದಿನ 10 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ಇದನ್ನು ನಾನು ಮಾಡಿಯೇ ತಿರುತ್ತೇನೆ ಎಂದು ಸವಾಲು ಹಾಕಿದರು.

ಮುಂಬರುವ ಕರ್ನಾಟಕದ ಉಪಚುನಾವಣೆಯಲ್ಲಿ ನಾವು ಗೆದ್ದು ಬರುತ್ತೇವೆ. ನಿಮಗೆ ತಾಕತ್ತು ಇದ್ರೆ ಗೆದ್ದು ತೋರಿಸಿ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಗೆ ಸವಾಲು ಹಾಕಿದರು.