ಜೂನ್ 20 ರಿಂದ 24: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ
ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಜೂನ್ 20 ರಂದು ಬೈಂದೂರು ಪ್ರವಾಸಿ ಮಂದಿರ, ಜೂನ್ 21 ರಂದು ಕುಂದಾಪುರ ಪ್ರವಾಸಿ ಮಂದಿರ, ಜೂನ್ 22 ರಂದು ಕಾರ್ಕಳ ಪ್ರವಾಸಿ ಮಂದಿರ, ಜೂನ್ 23 ರಂದು ಹೆಬ್ರಿ ಪ್ರವಾಸಿ ಮಂದಿರ, ಜೂನ್ 24 ರಂದು ಕಾಪು ಪುರಸಭೆ ಕಚೇರಿ ಹಾಗೂ ಜೂನ್ 27 ರಂದು ಬ್ರಹ್ಮಾವರ ಚಾಂತಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಚೇರಿಗೆ ನೀಡಬಹುದಾಗಿದೆ.

ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 / 2536661 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.