ವಿವೇಕಾನಂದರು ಯುವ ಜನತೆಯ ಪ್ರತಿನಿಧಿ- ರಘುಪತಿ ಭಟ್

ಉಡುಪಿ :ಸ್ವಾಮಿ ವಿವೇಕಾನಂದರು ಯುವಜನತೆಯ ಪ್ರತಿನಿಧಿ , ರಾಷ್ಟ್ರದ ಯುವ ಜನತೆ ಇಂದಿಗೂ ವಿವೇಕಾನಂದರ ಸಂದೇಶಗಳನ್ನು  ತಮ್ಮ ಆದರ್ಶಗಳನ್ನಾಗಿ  ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಅವರು ಭಾನುವಾರ, ಅಜ್ಜರಕಾಡು ಕ್ರೀಡಾಂಗಣದಲ್ಲಿ,  ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಯುವಜನ ಸಬಲೀಕರಣ ಮತ್ತು  ಕ್ರೀಡಾ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ  ತೆಂಕನಿಡಿಯೂರು, ಉಡುಪಿ (ಲೀಡ್ ಕಾಲೇಜು), ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ, ಪೂರ್ಣಪ್ರಜ್ಞ ಕಾಲೇಜು, ಉಡುಪಿ, ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜು, ಉಡುಪಿ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಮಾಧವ ಪೈ ಮೆಮೋರಿಯಲ್ ಕಾಲೇಜು, ಮಣಿಪಾಲ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಯುವಸಬಲೀಕರಣ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಭಾರತವು  ಹಾವಾಡಿಗರ ದೇಶ ಎಂಬ ಭಾವನೆ ಇದ್ದ ಕಾಲದಲ್ಲಿ , ಭಾರತೀಯತೆಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದವರು ವಿವೇಕಾನಂದರು, ವಿಶ್ವಧರ್ಮ ಸಮ್ಮೇಳನದಲ್ಲಿನ ಅವರ ಭಾಷಣ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯಿಂದ ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್ ಟಾಪ್ ಗಳನ್ನು ಶಾಸಕರು ವಿತರಿಸಿದರು.

ಸ್ವಾಮೀ ವಿವೇಕಾನಂದರ ಕುರಿತು   ಡಾ. ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆ ಇಲ್ಲಿಯ ಭೌತಶಾಸ್ತ್ರ ಉಪನ್ಯಾಸಕಿ ಅಕ್ಷತಾ ಗೋಖಲೆ  ಪ್ರಧಾನ ಭಾಷಣ ಮಾಡಿದರು.

ಸ್ವಾಮಿ ವಿವೇಕಾನಂದ ಜಯಂತಿ ಕುರಿತು ಜಿಲ್ಲೆಯ ಕಾಲೆಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ದೇಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,  ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ , ಡಾ. ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ  ಸ್ವಾಗತಿಸಿದರು, ಡಾ. ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ನಿತ್ಯಾನಂದ ವಂದಿಸಿದರು. ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ, ಬೋರ್ಡ್ ಹೈಸ್ಕೂಲ್‍ನಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ , ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ಕಾರ್ಯಕ್ರಮ ನಡೆಯಿತು.