ರಾಯಚೂರು:ಮನೆಯಲ್ಲಿ ಮಲಗಿದ್ದಾಗ ಹಾವು ಕಡಿತದಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇವದುರ್ಗ ತಾಲ್ಲೂಕಿನ ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ.
ಸಿರಿಯಮ್ಮ ರಮೇಶ್ (4) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದಾಗ ಹಾವು ಕಚ್ಚಿದೆ ತಕ್ಷಣವೇ ಪೋಷಕರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದರು.
ಹಾವು ಕಡಿತದಿಂದ ಬಾಲಕಿಯು ಸ್ಥಿತಿ ಗಂಭೀರವಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.












