ಅಮರನಾಥ ಗುಹೆಗೆ ರಾಜನಾಥ್ ಸಿಂಗ್ ಭೇಟಿ: ಪೂಜೆ ಸಲ್ಲಿಸಿ ದರ್ಶನ ಪಡೆದ ಸಚಿವರು

ಜಮ್ಮುಕಾಶ್ಮೀರ: ಜಮ್ಮು ಕಾಶ್ಮೀರ ದಲ್ಲಿರುವ ಪವಿತ್ರ ಸನ್ನಿಧಿ ಅಮರನಾಥ ಗುಹೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಭೇಟಿ ನೀಡಿ ದರ್ಶನ ಪಡೆದರು.
ರಕ್ಷಣಾ ಪಡೆಗಳ ಮುಖ್ಯಸ್ಥ ಎಂಎಂ ನರವಾಣೆ ಕೂಡ ರಕ್ಷಣಾ ಸಚಿವರ ಜತೆಗಿದ್ದು ದೇವರ ದರ್ಶನ ಪಡೆದರು.
ಈ ಬಗ್ಗೆ ಸ್ವತಃ ರಕ್ಷಣಾ ಸಚಿವರು ಟ್ವೀಟ್ ಮಾಡಿದ್ದು, ಅಮರನಾಥನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ವೇಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಮರನಾಥನ ಸನ್ನಿಧಿಯಲ್ಲಿ ಸಚಿವರು ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ.