ಬೆಂಗಳೂರು, ಜೂ.05: ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡ ರಾಮಲಿಂಗಾರೆಡ್ಡಿ ಅವ್ರು ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದು, ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.

















