ಬ್ರಹ್ಮಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಸಾದ್ ರಾಜ್ ಕಾಂಚನ್

ಬ್ರಹ್ಮಾವರ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಪ್ರಸಾದ್ ರಾಜ್ ಕಾಂಚನ್, ಶ್ರೀ‌ಮಹಾಲಿಂಗೇಶ್ವರ ದೇವರ ದರ್ಶನ ಪಡೆದು ದೇವರ ಪ್ರಸಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಡಳಿತ ಮಂಡಳಿ ಶಾಲು ಹೊದಿಸಿ ಅಭಿನಂದಿಸಿ ಶುಭ ಹಾರೈಸಿದರು.