ಅನಿವಾಸಿ ಕನ್ನಡಿಗರ ಮರ್ಡರ್‌ ಮಿಸ್ಟರಿ ‘ರತ್ನಮಂಜರಿ’ಚಿತ್ರ ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆ

ಕರುನಾಡ ಮೇಲಿನ ಅಭಿಮಾನದಿಂದಾಗಿ ಅನೇಕ ಅನಿವಾಸಿ ಕನ್ನಡಿಗರು ಸಿನಿಮಾ ರಂಗದತ್ತ ಮುಖ   ಮಾಡುತ್ತಿದ್ದಾರೆ. ಈ ಯಾದಿಗೆ ಹೊಸ ಸೇರ್ಪಡೆ ರತ್ನಮಂಜರಿ ಟೀಮ್‌. ಅಮೆರಿಕಾದಲ್ಲಿ ನಡೆದ ಭಾರತೀಯರೊಬ್ಬರ ಕೊಲೆಯ ಹಿನ್ನೆಲೆಯಾಗಿಟ್ಟುಕೊಂಡು ಇವರು ಸಿನಿಮಾ ಮಾಡುತ್ತಿದ್ದು, ಕೆಲ ಅನಿವಾಸಿ ಕನ್ನಡಿಗರು ಈ ಚಿತ್ರದಲ್ಲಿ ಪಾತ್ರ ಮಾಡುತ್ತಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಹೆಚ್ಚು ವಿಭಿನ್ನ ಚಿತ್ರಗಳೊಂದಿಗೆ ಕಾಲಿಡುತ್ತಿದ್ದಾರೆ.ಇದೊಂದು ಮರ್ಡರ್‌ ಮಿಸ್ಟರಿ ಕಥೆಯಾಗಿದ್ದು, ಅಮೆರಿಕಾದಲ್ಲಿ ಕನ್ನಡಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ನಟರಾಜ್‌ ಹಳೇಬಿಡು ಮತ್ತು ತಂಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಂದೀಪ್‌ ಕುಮಾರ್‌ ಸೇರಿದಂತೆ ಹಲವು ಗೆಳೆಯರು ಈ ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ.

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪ್ರಸಿದ್‌ ಈ ಚಿತ್ರದ ನಿರ್ದೇಶಕರು. ಯುಎಸ್‌ಎ,ಮಡಿಕೇರಿ, ಕೂರ್ಗ್‌ ಸೇರಿದಂತೆ ಹಲವು ಕಡೆಗಳಲ್ಲಿ  ಚಿತ್ರೀಕರಣ ಮಾಡಲಾಗಿದೆ .

ಚಿತ್ರದಲ್ಲಿ ರಾಜ್‌ ಚರಣ್‌ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಅಖಿಲಾ ಪ್ರಕಾಶ್ ,ಶ್ರದ್ಧಾ  ಸಾಲಿಯಾನ್ ,ಪಲ್ಲವಿ ರಾಜು  ನಾಯಕಿಯರಾಗಿ  ನಟಿಸಿದ್ದಾರೆ.ಚಿತ್ರ ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.