ಕಾರ್ಕಳದಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಉಡುಪಿ: ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಗುರುವಾರ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್, ಉಡುಪಿ ವಿಭಾಗದ ಪೊಲೀಸ್ ನಿರೀಕ್ಷಕ ರಫೀಕ್ ಎಂ., ಕಾರ್ಕಳ ತಹಶೀಲ್ದಾರ್ ಬಿ.ಅನಂತ ಶಂಕರ್, ಎ.ಡಿ.ಎಲ್.ಆರ್ ಶ್ರೀಕಲಾ, ಶಿರಸ್ತೆದಾರೆ ಲಕ್ಷ್ಮೀ, ಪುರಸಭೆ ಮುಖ್ಯಾಧಿಕಾರಿ ರೂಪ, ಮೆಸ್ಕಾಂ ಸಹಾಯಕ ಅಭಿಯಂತರ ಸಚಿನ್ ಆಚಾರ್ಯ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಗುರುದತ್ ಎಂ.ಎನ್, ತಾಲೂಕು ಕಚೇರಿಯ ಎಫ್.ಡಿ.ಎ ತಾರೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರಿಂದ ಒಟ್ಟು 5 ಅಹವಾಲುಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 4 ನ್ನು ಸ್ಥಳದಲ್ಲಿ ಇತ್ಯರ್ಥಪಡಿಸಿ, 1 ದೂರಿಗೆ ಸಂಬಂಧಿಸಿದಂತೆ ಪ್ರಪತ್ರ 1 ಮತ್ತು 2 ನ್ನು ನೀಡಲಾಯಿತು.