ಕಾರ್ಕಳ: ಯರ್ಲಪಾಡಿ ಗ್ರಾಮ ಪಂಚಾಯತ್ ವತಿಯಿಂದ, ಯರ್ಲಪಾಡಿ ಗ್ರಾಮದ ಜಾರ್ಕಳ, ನೂಜಿಗುಡ್ಡೆ, ಬಾವದಕರೆ ಬ್ರಹ್ಮಮುಗೇರ ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ವಿಶೇಷ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಯರ್ಲಪಾಡಿ, ಯರ್ಲಪಾಡಿ ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಮುಸ್ತಾಫ್ ಜಾರ್ಕಳ ಉಪಸ್ಥಿತರಿದ್ದರು.












