ತೆಲಂಗಾಣದ 2ನೇ ಸಿಎಂ ಆಗಿ ರೇವಂತ್​ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್​: ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್​ ಅವರು ಪ್ರಮಾಣ ವಚನ ಬೋಧಿಸಿದರು. ಇಲ್ಲಿನ ಎಲ್​ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು.ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಎಲ್​​ ಬಿ ನಗರ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭ ನಡೆಯುತ್ತಿದ್ದು, ಸಾವಿರಾರು ಜನರು ಭಾಗಿಯಾಗಿದ್ದಾರೆ.ರೇವಂತ್​ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಜೊತೆಗೆ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಸೋನಿಯಾ, ರಾಹುಲ್​, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಅವರು ಹಾಜರಿದ್ದರು.