ಮಳೆಗಾಲ ಆರಂಭವಾದ ಹಿನ್ನೆಲೆ: ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಅಗೆತ ನಿಷೇಧ

ಉಡುಪಿ: ಮಳೆಗಾಲ ಆರಂಭವಾದ ಹಿನ್ನಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 15 ರವರೆಗೆ
ಟೆಲಿಫೋನ್, ವಿದ್ಯುತ್ ಕೇಬಲ್, ಕುಡಿಯುವ ನೀರು, ಒಳ ಚರಂಡಿ ಕೊಳವೆ ಹಾಗೂ ಮತ್ತಿತರ ಕಾಮಗಾರಿಗಳಿಗೆ ರಸ್ತೆ ಅಗೆಯುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.