ಸಗ್ರಿ ಫ್ರೆಂಡ್ಸ್ – ಮಳೆನೀರು ಕೊಯ್ಲು ಕಾರ್ಯಾಗಾರ

 ಉಡುಪಿ: ಸಗ್ರಿ ಫ್ರೆಂಡ್ಸ್ ಸಗ್ರಿಯ ವತಿಯಿಂದ ಜೂನ್ ೨೩ ರಂದು ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ಹೆಚ್ಚಿಸುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು. ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಲತಜ್ಞರಾದ ಜೋಸೆಫ್ ಜಿ.ಎಂ ರೆಬೆಲ್ಲೋ ಅವರು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸಗ್ರಿ ಫ್ರೆಂಡ್ಸ್ ಸಗ್ರಿಯ ಅಧ್ಯಕ್ಷರಾದ ಅಮ್ಮುಂಜೆ ವೀರೇಂದ್ರ ನಾಯಕ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ಗುರುರಾಜ್ ಭಟ್ ಸಗ್ರಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಸಭಾ ಸದಸ್ಯೆ ಶ್ರೀಮತಿ ಭಾರತಿ ಪ್ರಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸಂತೋಷ್ ಸಗ್ರಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ರಾಕೇಶ್ ಶೆಟ್ಟಿ ವಂದಿಸಿದರು.