ಶಂಕರಪುರ: ಸಾಲ ತೀರಿಸಲಾಗದೆ ಜೀವನದಲ್ಲಿ ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಶಿರ್ವಾ: ಸಾಲ ತೀರಿಸಲಾಗದೆ ಮನನೊಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಶಂಕರಪುರದಲ್ಲಿ ಇಂದು ಬೆಳಕಿಗೆ ಬಂದಿದೆ.

ಕುರ್ಕಾಲು ಗ್ರಾಮದ ಶಂಕರಪುರ ನಿವಾಸಿ 53 ವರ್ಷದ ರಾಜೇಶ್ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ರಿಕ್ಷಾ ಚಾಲಕ ವೃತ್ತಿ ಮಾಡಿಕೊಂಡಿದ್ದು, ಮನೆ ಕಟ್ಟಲು ಬ್ಯಾಂಕ್ ನಲ್ಲಿ ಸಾಲ ಮಾಡಿಕೊಂಡಿದ್ದರು. ಅಲ್ಲದೆ, ಸಾಕಷ್ಟು ಕೈ ಸಾಲ ಕೂಡ ಮಾಡಿಕೊಂಡಿದ್ದರು. ಹಾಗೆ ತಾಯಿಗೆ ಸೇರಿದ ಜಾಗವು ಪಾಲು ಆಗಲಿರಲಿಲ್ಲ.

ಇದೇ ಖಿನ್ನತೆಯಲ್ಲಿ ತಾನು ಮಾಡಿದ ಸಾಲ ತೀರಿಸಲಾಗದೆ ಮನನೊಂದು ಜ.25ರ ರಾತ್ರಿ 11.30 ರಿಂದ ಜ.26ರ ಬೆಳಿಗ್ಗೆ 7:45ರ ನಡುವಿನ ಅವಧಿಯಲ್ಲಿ ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಶೆಡ್‌ ಒಂದರ ಮಾಡಿನ ಜಂತಿಗೆ ಕುತ್ತಿಗೆಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.