ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣ್ಣು ಉಳಿಸಿ ಜಾಗೃತಿ ಕಾರ್ಯಕ್ರಮ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಮಣ್ಣಿನ ರಕ್ಷಣೆ ಕುರಿತು ಮಣ್ಣು ಉಳಿಸಿ ಜಾಗೃತಿ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಲ್ಕತ್ತದ ಸಾಹಿಲ್ ಝಾ ಮಾತನಾಡಿ, ಮಣ್ಣು
ನಮ್ಮ ಪರಿಸರ ಮತ್ತು ಬದುಕಿನ ಅವಿಭಾಜ್ಯ ಅಂಗವಾಗಿದೆ. ಸುಸ್ಥಿರ ಕೃಷಿ ಮತ್ತು ಪರಿಸರಕ್ಕಾಗಿ ಮಣ್ಣನ್ನು ಉಳಿಸಬೇಕಾಗಿದೆ. ಮಣ್ಣಿನ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ನಿತ್ಯವೂ ದೇಶಾದ್ಯಂತ ಸಾವಿರಾರು ಕಿಲೋಮೀಟರ್ ಸೈಕಲ್ ನಲ್ಲಿ ಸಂಚರಿಸುತ್ತಿದ್ದೇನೆ. ಮಣ್ಣು ಕುರಿತು ಮಾತಾಡಿ, ಮಣ್ಣು ಕುರಿತು ಹಾಡಿ, ಮಣ್ಣನ್ನೇ ಉಸಿರಾಗಿಸಿ, ಮಣ್ಣಿನಿಂದಲೇ ಬಾಳಿ. ನಾವೆಲ್ಲ ಜೊತೆಯಾಗಿ ಸೇರಿ ಮಣ್ಣಿನ ಪ್ರಾಮುಖ್ಯತೆಯನ್ನು ತಿಳಿಸಿ ಮಣ್ಣನ್ನು ರಕ್ಷಿಸೋಣ. ನೀವು ಸಹ ವಿವಿಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮೂಲಕ ಮಣ್ಣಿನ ರಕ್ಷಣೆಯಲ್ಲಿ ಭಾಗಿಯಾಗಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕುಂದಾಪುರ ಘಟಕದ ಜಯಕರ ಶೆಟ್ಟಿ ಕಾಲೇಜಿನ ಮಧ್ಯಾಹ್ನದ ಊಟಕ್ಕೆ 25,000 ರೂಪಾಯಿಗಳನ್ನು ನೀಡಿದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ವೆಂಕಟೇಶ್ ಬುದ್ಯಾ, ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕ ಸತ್ಯನಾರಾಯಣ ಉಪಸ್ಥಿತರಿದ್ದರು.

ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ವಿದ್ಯಾಧರ ವಂದಿಸಿದರು.