ತೆಂಕುಪೇಟೆ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶಾರದಾ ಪ್ರತಿಷ್ಠೆ

ಉಡುಪಿ: ಇಲ್ಲಿನ ತೆಂಕುಪೇಟೆ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶಾರದಾ ದೇವಿಯ ಪ್ರತಿಷ್ಠೆ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ದೇವಳದ ಅರ್ಚಕರುಗಳಾದ ದಯಾಘನ್ ಭಟ್, ವಿನಾಯಕ ಭಟ್ ಧಾರ್ಮಿಕ ಪೂಜಾ ವಿಧಾನಗಳನ್ನು ನೆರವೇರಿಸಿ ಶಾರದಾ ದೇವಿಗೆ ಮಹಾ ಮಂಗಳಾರತಿ ಬೆಳಗಿಸಿದರು.

ಈ ಹಿನ್ನೆಲೆಯಲ್ಲಿ ಉಡುಪಿ ನಗರವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು.

ದೇವಳದ ಆಡಳಿತ ಮೊಕ್ತೇಸರ ಪಿ.ವಿ.ಶೆಣೈ, ವಸಂತ್ ಕಿಣಿ, ವಿಶ್ವನಾಥ್ ಭಟ್, ರೋಹಿತಾಕ್ಷ ಪಡಿಯಾರ್ , ಗಣೇಶ್ ಕಿಣಿ, ಅಶೋಕ ಬಾಳಿಗಾ , ನರಹರಿ ಪೈ, ವಿಶಾಲ್ ಶೆಣೈ, ಉಮೇಶ್ ಪೈ, ಗಿರೀಶ ಭಟ್, ನಾಗೇಶ್ ಪೈ, ನಿತೇಶ್ ಶೆಣೈ ಮತ್ತು ಜಿ ಎಸ್ ಬಿ ಯುವಕ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.