ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಷಟ್ ಶಿರ ಸುಬ್ರಮಣ್ಯ ಸ್ವಾಮಿ ವರ್ಧಂತಿ ಮಹೋತ್ಸವ

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿರುವ ವಲ್ಲಿ ದೇವಯಾನಿ ಸಹಿತ ಷಟ್ ಶಿರ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಇದೇ ತಿಂಗಳ ತಾರೀಕು 24ರ ಬುಧವಾರದಂದು ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿರುವುದು.

ತತ್ ಸಂಬಂಧವಾಗಿ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಪಂಚ ವಿಂಷತಿ ಕಲಶಾರಾಧನೆ,
ಕಲಶಾಭಿಷೇಕ, ಬ್ರಾಹ್ಮಣಾರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ ಹಾಗೂ ಮಹಾ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ಕ್ಷೇತ್ರದ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.