ಕಾರ್ಕಳ: ಜೂ. 21 ರಂದು ಶ್ರೀ ಕ್ಷೇತ್ರ ಅತ್ತೂರು ಪರ್ಪೆಲೆಗಿರಿಗೆ ಶಿಲಾಯಾತ್ರೆ

ಕಾರ್ಕಳ: ಕಲ್ಕುಡ ಸ-ಪರಿವಾರ ದೈವಸ್ಥಾನ ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿಯ ಪುನರುತ್ಥಾನದ ನಿಮಿತ್ತ ಜೂ. 21 ರಂದು ಬೆಳಿಗ್ಗೆ 7:30 ಗಂಟೆಗೆ ಶಿಲಾಯಾತ್ರೆ ನಡೆಯಲಿದೆ. ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಿಂದ ಆರಂಭವಾಗುವ ಶಿಲಾಯಾತ್ರೆ ಅನಂತಶಯನ ಮಾರ್ಗವಾಗಿ ಗೊಮ್ಮಟ ಬೆಟ್ಟ, ಆನೆಕೆರೆ, ಶ್ರೀ ಕೃಷ್ಣ ದೇವಸ್ಥಾನ, ಬಾಲಾಜಿ ಅಯ್ಯಪ್ಪ ಶಿಬಿರ, ದೂಪದಕಟ್ಟೆಯಿಂದ ಅತ್ತೂರು ಪರ್ಪಲೆಗಿರಿಗೆ ತಲುಪಲಿದೆ. ನಂತರ 10 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಶಿಲಾಪೂಜೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.