ಶಿರ್ವ ಹಿಂದೂ ಜೂನಿಯರ್ ಕಾಲೇಜು:ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಶಿರ್ವ: ಶಿರ್ವದ ಹಿಂದುಾ ಜೂನಿಯರ್ ಕಾಲೇಜಿನ ಪ್ರಥಮ ವರ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸೈನ್ಸ್, ಕಾಮರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮ” ಜ್ಞಾನ ಚೇತನ ಎಜುಕೇಷನ್‌ ಟ್ರಸ್ಟಿನ” ವತಿಯಿಂದ ಹಮ್ಮಿಕೊಳ್ಳಲಾಯಿತು.ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಕೇೂರಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಂಜಿಎಂ.ಕಾಲೇಜಿನ ನಿವೃತ್ತ ರಾಜ್ಯ ಶಾಸ್ತ್ರ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ “ಶಿರ್ವದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅನುಭವಿ ಉಪನ್ಯಾಸಕರನ್ನು ನೇಮಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ “ಜ್ಞಾನ ಚೇತನ ಎಜುಕೇಷನ್‌ ಟ್ರಸ್ಟ್ “ಹೊಸದೊಂದು ಹೆಜ್ಜೆಯನ್ನು ಇಟ್ಟಿರುವುದು ಶ್ಲಾಘನೀಯ ಎಂದು ಅಭಿನಂದಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿ.ಇ.ಟಿ, ನೀಟ್, ಸಿ.ಎ. ಫೌಂಡೇಶನ್ ಮುಂತಾದ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಿ ಯಶಸ್ವಿ ಕಾಣಲು ಜ್ಞಾನ ಚೇತನ ಶೈಕ್ಷಣಿಕ ಸಂಸ್ಥೆ ತರಬೇತಿ ನೀಡಲುಮುಂದಾಗಿರುವುದು ಶಿರ್ವ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ ಎಂದು ಅಭಿಪ್ರಾಯಿಸಿದರು.

ಕಾಲೇಜಿನ ಅಕಾಡೆಮಿಕ್ ಡೀನ್ ಪ್ರೊ.ಗುರುಪ್ರಸಾದ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮ ಶಿಸ್ತಿನ ಕುರಿತಾಗಿ ವಿಶೇಷ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸುಂದರ ಮೇರ: ಪೇುಾಷಕರ ಪರವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜ್ಞಾನ ಚೇತನ ಟ್ರಸ್ಟ್ ಸದಸ್ಯರಾದ ಸತೀಶ್ ಕುಮಾರ್ ಹೆಗ್ಡೆ ಸ್ವಾಗತಿಸಿದರು.ಜ್ಞಾನ ಚೇತನ ಟ್ರಸ್ಟ್ ನ ಕಾರ್ಯದರ್ಶಿ ಪ್ರೊ.ಜಯಪ್ರಕಾಶ್ ಶೆಟ್ಟಿ ವಂದಿಸಿದರು.ಉಪನ್ಯಾಸಕ ರೇೂಹನ್ ಕುಮಾರ್ ಕಾರ್ಯಕ್ರಮ ನಿರುಾಪಿಸಿದರು.