ಶಿವಪುರ ಶಂಕರದೇವ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭೇಟಿ.

ಹೆಬ್ರಿ: ತಾಲ್ಲೂಕಿನ ಶಿವಪುರ ಶಂಕರದೇವ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಈಚೆಗೆ ಭೇಟಿ ನೀಡಿ ಜೀರ್ಣೋದ್ಧಾರದ ಕಾಮಗಾರಿ ವೀಕ್ಷಿಸಿದರು.ಜೀರ್ಣೋದ್ಧಾರ ಸಮಿತಿಯ ಮನವಿ ಸ್ವೀಕರಿಸಿ ಸರ್ಕಾರದಿಂದ ಸಿಗುವ ಅನುದಾನ ಕೊಡಿಸುವ ಮತ್ತು ದೇವಸ್ಥಾನದ ಎಡಭಾಗದಲ್ಲಿ ತಡೆಗೋಡೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ ಸದಸ್ಯರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ನಾಯಕ್‌, ಪ್ರಮುಖರಾದ ಹುಣ್ಸೆದಡಿ ಸುರೇಶ ಶೆಟ್ಟಿ, ಮೂರ್ಸಾಲು ಮೋಹನದಾಸ ನಾಯಕ್‌, ಬಿಲ್ಲುಬೈಲು ಚಂದ್ರಶೇಖರ ಶೆಟ್ಟಿ, ನಾಯರಕೋಡು ಸಂತೋಷ ಶೆಟ್ಟಿ, ಶಿವಪುರ ಶ್ರೀನಿವಾಸ ಹೆಬ್ಬಾರ್‌, ಸುಮಿತ್ರಾ ನಾಯ್ಕ್‌ ಪಾಲ್ಗೊಂಡಿದ್ದರು.