ಸಂಸದೆ ಶೋಭಾ ಕರಂದ್ಲಾಜೆ ಅವರ ನೂತನ ಕಚೇರಿ ಉದ್ಘಾಟನೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ನೂತನ ಕಚೇರಿ ಮಣಿಪಾಲ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದಲ್ಲಿ ಸೋಮವಾರ ಆರಂಭಗೊಂಡಿತು. ಪಕ್ಷದ ಹಿರಿಯ ಮುಖಂಡ ಸೋಮಶೇಖರ್‌ ಭಟ್‌ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು. ಕ್ಷೇತ್ರಕ್ಕೆ
ಮಂಜೂರಾದ ಸಂಸ್ಥೆಗಳಿಗೆ ಪೂರ್ಣಪ್ರಮಾಣದ ಕಟ್ಟಡ ನಿರ್ಮಿಸಲಾಗುವುದು. ಕೊಂಕಣ ರೈಲ್ವೆ
ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ರೈತರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ
ವಹಿಸಲಾಗುವುದು. ಕೋಡಿಕನ್ಯಾಣ, ಹೆಜಮಾಡಿಯಲ್ಲಿ ಪೂರ್ಣ ಪ್ರಮಾಣದ ಬಂದರನ್ನು
ನಿರ್ಮಿಸಲಾಗುವುದು ಎಂದರು.
ಮುಂದಿನ ಐದು ವರ್ಷಗಳ ಕಾಲ ಪ್ರತಿ ಸೋಮವಾರ ಉಡುಪಿ ಹಾಗೂ ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕಚೇರಿಯಲ್ಲಿದ್ದು, ಜನರ ಅಹವಾಲು ಸ್ವೀಕರಿಸಲಾಗುವುದು. ಮಧ್ಯಾಹ್ನ ನಂತರ ಒಂದು ಹೋಬಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಲಾಗುವುದು ಎಂದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್‌
ಕುಮಾರ್‌, ರಘುಪತಿ ಭಟ್‌, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮೀನುಗಾರಿಕಾ
-ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌
ರಾವ್‌, ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.