ನಮ್ಮಲ್ಲಿ ಭಿನ್ನಮತ ಇಲ್ಲ: ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ- ಸಂಸದೆ ಶೋಭಾ 

ಉಡುಪಿ:ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಟಿಕೆಟ್ ಗೆ ಆಕಾಂಕ್ಷೆ ಪಡೋದು ತಪ್ಪಲ್ಲ.‌ ಟಿಕೆಟ್ ಘೋಷಣೆಯಾದ ಬಳಿಕ ಅಭ್ಯರ್ಥಿ ಪರ ದುಡಿಯುತ್ತಾರೆ ಎಂದು ಸಂಸದೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಬಿಜೆಪಿ ವರಿಷ್ಠರು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಅವಕಾಶ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಾವು ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ ಎಂದರು.
ಕ್ಷೇತ್ರದ ಜನ ಆಶೀರ್ವಾದ ಮತ್ತೊಮ್ಮೆ ಮಾಡ್ತಾರೆ ಅನ್ನೋ ನಂಬಿಕೆ ಇದೆ. ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡ್ತೇನೆ. ಈ ಬಾರಿ ದೇಶದಲ್ಲಿ ಬಿಜೆಪಿಯ ಮುನ್ನೂರು ಸಂಸದರು ಗೆಲುತ್ತಾರೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡ್ತೇವೆ. ಕಾರ್ಯಕರ್ತರು ನಮ್ಮ ಸೇನಾನಿಗಳು. ಸೈನಿಕರು ಗಡಿಯಲ್ಲಿ ಯುದ್ದಮಾಡಿದಂತೆ ಕೆಲಸ ಮಾಡ್ತಾರೆ. ಮೋದಿಯನ್ನು ಗೆಲ್ಲಿಸಲು ಹಗಲಿರುಳು ದುಡಿಯುತ್ತಾರೆ ಎಂದು ಹೇಳಿದ್ದಾರೆ