ಉಡುಪಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಖುಷಿಯೋಂಕಾ ಆಶಿಯಾನಾ ವಿಷಯಾಧಾರಿತ ಕಿರುಚಿತ್ರ ಸ್ಪರ್ಧೆ ಹಾಗೂ ಆವಾಸ್ ಪರ್ ಸಂವಾದ್ ಎಂಬ ವಿಷಯದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಕಾರ್ಯಾಗಾರದನ್ವಯ ಶಿಕ್ಷಣ ಸಂಸ್ಥೆಗಳು/ ಪ್ರಾಥಮಿಕ ಹಣಕಾಸು ಸಂಸ್ಥೆಗಳು ಕಾರ್ಯಾಗಾರದಲ್ಲಿ ನೋಂದಾಯಿಸಬೇಕು. ಆಯ್ಕೆಯಾದ ಸಂಸ್ಥೆಗೆ ಸರ್ಕಾರದಿಂದ ಆರ್ಥಿಕ ನೆರವು ದೊರೆಯುತ್ತದೆ.
ಆಸಕ್ತರು ಪಿಎಂಎವೈ(ಯು) ಅಂತರ್ಜಾಲ ತಾಣದಲ್ಲಿ ನೋಂದಾಯಿಸಿ ತಾವು ಚಿತ್ರೀಕರಿಸಿದ ಕಿರುಚಿತ್ರವನ್ನು ಆಪ್ ಲೋಡ್ ಮಾಡಲು ಸೆಪ್ಟೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾ ನಗರಾಭಿವೃದ್ಧಿಕೋಶ ಕಚೇರಿ ಮತ್ತು ಪಟ್ಟಣ ಪಂಚಾಯತ್ ಸಾಲಿಗ್ರಾಮ ಕಚೇರಿಯನ್ನು ಸಂಪರ್ಕಿಸಬಹುದೆAದು ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.












