ಮೋಹಿನಿ ಅಲಂಕಾರದಲ್ಲಿ ಮನಮೋಹನ ಕೃಷ್ಣ!!

ಉಡುಪಿ: ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣ ದೇವರಿಗೆ ‘ಮೋಹಿನಿ’ ವಿಶೇಷ ಅಲಂಕಾರವನ್ನು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಸ್ವಾಮೀಜಿಯವರು ನೆರವೇರಿಸಿ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.