ಶ್ರೀವೆಂ.ಪ.ಪೂ ಕಾಲೇಜಿನ ಅನುಷಾ ಪ್ರಭು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

ಕುಂದಾಪುರ: 2023 ರ ಜೂನ್ ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಪ್ರಭು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.