ಕೇಂದ್ರದ ಆಡಳಿತ ಪ್ಯಾಸಿಸಂಗೆ ಸಮಾನ: ಸಿದ್ದರಾಮಯ್ಯ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಫ್ಯಾಸಿಸಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರದ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂಪಾಯಿ ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ ಮಾಡಿದ್ದೆವು. ಆದರೆ ಎರಡು ತಿಂಗಳ ಬಳಿಕ ಕೇವಲ 1200 ಕೋಟಿ ನೀಡಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಆದರೆ ಇದೀಗ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ಖಜಾನೆಯಲ್ಲಿ ಹಣ ಖಾಲಿ ಆಗೋಕೆ ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದು ಹೇಳಿದರು.